01/02/2017
12:18 PMಕರಾವಳಿ ಹೈವೇಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು. ಸಾರಿಗೆ ಕ್ಷೇತ್ರಕ್ಕೆ 2.41 ಲಕ್ಷ ಕೋಟಿ ರೂಪಾಯಿ ಅನುದಾನ. ಆಲ್ ಲೈನ್ ನಲ್ಲಿ ಎಫ್ ಡಿಐ ಪ್ರಸ್ತಾವನೆ. 1ಕೋಟಿ 50 ಲಕ್ಷ ಹಳ್ಳಿಗಳಿಗೆ ಬ್ರಾಡ್ ಬ್ಯಾಂಡ್ ಯೋಜನೆ.
12:14 PMಎಲ್ಲಾ ರಾಷ್ಟ್ರೀಯ ಬ್ಯಾಂಕ್ ಗಳಿಗೆ 10 ಸಾವಿರ ಕೋಟಿ ಅನುದಾನ. ಪೇಮೆಂಟ್ ನಿಯಂತ್ರಣ ಮಂಡಳಿ ಸ್ಥಾಪನೆ. ಎಲ್ಲಾ ಸರ್ಕಾರಿ ಸಂಸ್ಥೆಗಳಿಗೆ ಡಿಜಿಟಲ್ ಪಾವತಿ ಕಡ್ಡಾಯ.
12:13 PMಅಕ್ರಮ ಚಿಟ್ ಫಂಡ್ ಗಳಿಗೆ ಕಡಿವಾಣ ಹಾಕಲು ದಿಟ್ಟ ಕ್ರಮ. 25 ಲಕ್ಷ ಕೋಟಿ ಜನರಿಂದ ಭೀಮ್ ಆಪ್ ಬಳಕೆ. ಮುದ್ರಾ ಯೋಜನೆಯಡಿ ಸಾಲ ವಿತರಣೆ. ಭೀಮ್ ಆಪ್ ಬಳಕೆದಾರರಿಗೆ 2 ಹೊಸ ಯೋಜನೆ. ಬ್ಯಾಂಕಿಂಗ್ ವಲಯದಲ್ಲಿ ಡಿಜಿಟಲ್ ಕ್ರಾಂತಿ.
12:11 PMಟೆಕ್ಸ್ ಟೈಲ್ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಯೋಜನೆ. ಎಲ್ಲಾ ಪರೀಕ್ಷಗಳಿಗೆ ಒಂದೇ ಒಂದು ಪ್ರಾಧಿಕಾರ. ದೇಶದಲ್ಲಿ 2 ಹೊಸ ತೈಲಾಗಾರ ಸ್ಥಾಪನೆ ಯೋಜನೆ. ಹಣಕಾಸು ವಲಯದಲ್ಲಿ ಸೈಬರ್ ಸೆಕ್ಯುರಿಟಿಗೆ ಒತ್ತು.
12:06 PMರೈಲ್ವೆ ಸುರಕ್ಷಾ ಯೋಜನೆಗೆ 1 ಲಕ್ಷ ಕೋಟಿ ರೂಪಾಯಿ, ದೇಶದಲ್ಲಿ 70 ರೈಲ್ವೆ ಯೋಜನೆಗಳಿಗೆ ಅಸ್ತು.
12:05 PMತೀರ್ಥಯಾತ್ರಗೆ ವಿಶೇಷ ರೈಲುಗಳ ಆಯೋಜನೆ.ರೈಲ್ವೆ ಮಾರ್ಗ ಅಭಿವೃದ್ಧಿಗೆ 1.31ಲಕ್ಷ ಕೋಟಿ ರೂಪಾಯಿ ಅನುದಾನ. 25 ರೈಲ್ವೆ ನಿಲ್ದಾಣ ನವೀಕರಣ ಮತ್ತು ಅಭಿವೃದ್ಧಿ. ದೂರು ನೀಡಿದರೆ, ತಕ್ಷಣ ರೈಲ್ವೆ ಬೋಗಿಗಳ ಶುಚಿತ್ವಕ್ಕೆ ಅವಕಾಶ.
12:03 PMರೈಲ್ವೆ ವೆಬ್ ಸೈಟ್ ನಲ್ಲಿ ಟಿಕೆಟ್ ಬುಕ್ ಮಾಡಿದರೆ ಸರ್ವಿಸ್ ಚಾರ್ಜ್ ಇಲ್ಲ. 3500 ಕಿಮೀ ಹೊಸ ರೈಲ್ವೆ ಹಳಿಗಳಿಗೆ ಯೋಜನೆ. ಬಂಡವಾಳ ಹೂಡಿಕೆ ಸುರಕ್ಷತೆಗೆ ಒತ್ತು.
12:02 PMಇ ಟಿಕೆಟ್ ಮೇಲೆ ಸರ್ವಿಸ್ ಚಾರ್ಜ್ ಇರುವುದಿಲ್ಲ. 2020ರೊಳಗೆ ಮಾನವ ರಹಿತ ರೈಲ್ವೆ ಕ್ರಾಸಿಂಗ್. 4 ಪ್ರಮುಖ ಉದ್ದೇಶಗಳೊಂದಿಗೆ ರೈಲ್ವೆ ಅಭಿವೃದ್ಧಿ. ಆನ್ ಲೈನ್ ರೈಲು ಟಿಕೆಂಟ್ ಬುಕ್ಕಿಂಗ್ ಗೆ ಸೇವಾದರ ಇಲ್ಲ.
12:01 PMರೈಲ್ವೆ ಸುರಕ್ಷತೆಗೆ 1 ಲಕ್ಷ ಕೋಟಿ, ಈ ಸಾಲಿನಲ್ಲಿ ಹೆಚ್ಚುವರಿ 5000 ಪಿಜಿ ಸೀಟ್ಸ್. 600 ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ. ಹಿರಿಯ ನಾಗರಿಕರಿಗೆ ಆರೋಗ್ಯ ಕಾರ್ಡ್ ಗಳ ವಿತರಣೆ.
11:59 AMಪರಿಶಿಷ್ಟ ಜಾತಿಗೆ 53ಸಾವಿರ ಕೋಟಿ ಅನುದಾನ. ಕೌಶಲಾಭಿವೃದ್ಧಿಗಾಗಿ 100 ಕೇಂದ್ರಗಳ ಸ್ಥಾಪನೆಗೆ ನಿರ್ಧಾರ. ಕೃಷಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆಗೆ ನಿರ್ಧಾರ. ದೇಶದ ಪ್ರತಿ ಹಳ್ಳಿಯಲ್ಲಿಯೂ ಶೌಚಾಲಯ ನಿರ್ಮಾಣ.
11:56 AMಹೆಚ್ಚು ಕಾಲೇಜುಗಳಿಗೆ ಸ್ವಾಯತ್ತೆ ನೀಡಲು ನಿರ್ಧಾರ. ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರಕ್ಕೆ 10 ಗುರಿ. ರೈತರ ಪ್ರಗತಿ, ಯುವಶಕ್ತಿ ಬಲವರ್ಧನೆ, ಡಿಜಿಟಲ್ ಇಂಡಿಯಾ, ಸಾರ್ವಜನಿಕ ಸೇವೆ, ದುಂದುವೆಚ್ಚಕ್ಕೆ ಕಡಿವಾಣ ಸೇರಿ 10 ಅಂಶಗಳತ್ತ ಚಿತ್ತ.
11:54 AMಹಿರಿಯ ನಾಗರಿಕರಿಗೆ ಪಿಂಚಣಿ, ವಿದ್ಯುತ್ ಯೋಜನೆಗೆ 4500 ಕೋಟಿ ರೂಪಾಯಿ. ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆ.ಶಾಲೆಗಳಲ್ಲಿ ಕಲಿಕೆಗೆ ಹೊಸ ಸುಧಾರಿತ ವ್ಯವಸ್ಥೆ. ಗ್ರಾಮೀಣ ಶಿಕ್ಷಣಕ್ಕಾಗಿ ತಂತ್ರಜ್ಞಾನದ ಅಳವಡಿಕೆ.
11:52 AMದೇಶದಲ್ಲಿ ಒಂದೂವರೆ ಲಕ್ಷ ಉಪ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ ಏರಿಕೆ. ದೇಶದ 5 ಕಡೆ ಪ್ರವಾಸೋದ್ಯಮ ವಲಯ ಸ್ಥಾಪನೆ. ಆಧಾರ್ ಕಾರ್ಡ್ ಆಧಾರಿತ ಆರೋಗ್ಯ ಕಾರ್ಡ್ ಯೋಜನೆ.
11:51 AMಸಿಬಿಎಸ್ ಸಿ ಪ್ರವೇಶ ಪರೀಕ್ಷೆ ಇಲ್ಲ. ಹನಿ ನೀರಾವರಿಗೆ 500 ಕೋಟಿ ರೂಪಾಯಿ. ಜಾರ್ಖಂಡ್, ಗುಜರಾತ್ ನಲ್ಲಿ ಏಮ್ಸ್ ಸ್ಥಾಪನೆ. 2025ರೊಳಗೆ ಕ್ಷಯರೋಗ ನಿರ್ಮೂಲನೆಗೆ ಗುರಿ.
11:49 AM1 ಕೋಟಿ ಕುಟುಂಬಗಳಿಗೆ ಅಂತ್ಯೋದಯ ಯೋಜನೆ. ಗರ್ಭಿಣಿಯರಿಗೆ 6 ಸಾವಿರ ರೂಪಾಯಿ ಸಹಾಯಧನ. ನೇರವಾಗಿ ಗರ್ಭಿಣಿಯರ ಖಾತೆಗೆ ಹಣ. 14 ಲಕ್ಷ ಅಂಗನವಾಡಿಗಳ ಸ್ಥಾಪನೆ. ಗ್ರಾಮೀಣ ಭಾಗದಲ್ಲಿ ಮನೆ ನಿರ್ಮಾಣಕ್ಕೆ ಕಡಿಮೆ ಬಡ್ಡಿದರದಲ್ಲಿ ಸಾಲ.
11:48 AMಮಣ್ಣಿನ ಗುಣಮಟ್ಟ ಪರೀಕ್ಷಾ ಕೇಂದ್ರಗಳ ಸ್ಥಾಪನೆ. 1.87 ಲಕ್ಷ ಕೋಟಿ ಗ್ರಾಮೀಣದ ಅಭಿವೃದ್ಧಿಗೆ ಬಳಕೆ. ರಾಷ್ಟ್ರೀಯ ಗುಣಮಟ್ಟ ಅಕಾಡೆಮಿ ಸ್ಥಾಪನೆ ಯೋಜನೆ.
11:46 AM2018ರ ವೇಳೆಗೆ ಹಳ್ಳಿ, ಹಳ್ಳಿಗೂ ವಿದ್ಯುತ್ ಯೋಜನೆ ಗುರಿ. ನೀರಾವರಿ ಯೋಜನೆಗೆ 20 ಸಾವಿರ ಕೋಟಿ ರೂಪಾಯಿ. ಗ್ರಾಮೀಣ ರಸ್ತೆ ಅಭಿವೃದ್ಧಿಗೆ 27 ಸಾವಿರ ಕೋಟಿ ರೂಪಾಯಿ ವಿನಿಯೋಗ.
11:45 AMನರೇಗಾ ಯೋಜನೆಗೆ 48 ಸಾವಿರ ಕೋಟಿ ರೂಪಾಯಿ ಅನುದಾನ. ಗ್ರಾಮೀಣ ಪ್ರದೇಶದ ಸ್ಥಳೀಯ ಸಂಶೋಧನಾ ಪ್ರತಿಭೆಗಳಿಗೆ ಅವಕಾಶ. ಆನ್ ಲೈನ್ ಶಿಕ್ಷಣಕ್ಕೆ ಒತ್ತು. 350 ಹೊಸ ಕೋರ್ಸ್.
11:44 AM2019ರ ಅಂತ್ಯಕ್ಕೆ ಗ್ರಾಮಗಳಲ್ಲಿ 1 ಕೋಟಿ ಮನೆಗಳ ನಿರ್ಮಾಣದ ಗುರಿ. ಪ್ರಧಾನಮಂತ್ರಿ ಅವಾಜ್ ಯೋಜನೆಗೆ 28 ಸಾವಿರ ಕೋಟಿ ರೂಪಾಯಿ. ಗ್ರಾಮಗಳ ಅಭಿವೃದ್ಧಿಗೆ 3 ಲಕ್ಷ ಕೋಟಿ ರೂಪಾಯಿ.
11:41 AMಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಒತ್ತು. ಹಾಲು ಉತ್ಪಾದನೆ ನಿಧಿಯಲ್ಲಿ ಹೆಚ್ಚಳ. 2018ರೊಳಗೆ ಗ್ರಾಮೀಣ ಪ್ರದೇಶದಲ್ಲಿ ಶೇ.100ರಷ್ಟು ವಿದ್ಯುತ್ ಪೂರೈಕೆ.
11:40 AM1 ಕೋಟಿ ಮನೆಗಳ ನಿರ್ಮಾಣದ ಗುರಿ. 50 ಸಾವಿರ ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿಗೆ ಮನ್ನಣೆ. 28 ಸಾವಿರ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ. ಡಿಜಿಟಲ್ ಇಂಡಿಯಾಗೆ ಒತ್ತು.
11:39 AMಯುವಶಕ್ತಿ ಬಲವರ್ಧನೆ, ಮೂಲಭೂತ ವ್ಯವಸ್ಥೆಗೆ ಆದ್ಯತೆ.ಬಡವರ ಅಭ್ಯುದಯ, ಹಳ್ಳಿಗಳ ಅಭಿವೃದ್ಧಿ ಕೇಂದ್ರದ ಗುರಿ. ಹೈನುಗಾರಿಕೆ ಅಭಿವೃದ್ಧಿಗೆ 8 ಸಾವಿರ ಕೋಟಿ. ಗ್ರಾಮೀಣ ಪ್ರದೇಶಗಳ 1 ಕೋಟಿ ಕುಟುಂಬಗಳ ಬಡತನ ನಿರ್ಮೂಲನೆ.
11:37 AMರೈತರಿಗೆ 10 ಲಕ್ಷ ಕೋಟಿ ರೂಪಾಯಿ ಸಾಲ ಸೌಲಭ್ಯದ ಗುರಿ. ಡಿಸೆಂಬರ್ 31ಕ್ಕೆ ಪ್ರಧಾನಿ ಮೋದಿ ಅವರಿಂದ ಹಲವು ಯೋಜನೆಗಳ ಘೋಷಣೆಯಾಗಿದೆ.
11:36 AMಜಿಡಿಪಿ ದರದಲ್ಲಿ ಹೆಚ್ಚಳವಾಗುತ್ತದೆ, ಪ್ರಗತಿ ಸಾಧ್ಯವಾಗಲಿದೆ. ದಾಸ್ಯದ ದಿನಗಳ ಸಂಪ್ರದಾಯವ್ನು ಕೈಬಿಡಲಾಗಿದೆ. ಜಿಎಸ್ ಟಿ ಜಾರಿ ಬಳಿಕ ದೇಶದ ಪ್ರಗತಿ ವೇಗವಾಗಿ ಬೆಳೆಯಲಿದೆ. ಭಾರತದ ಮುಂದಿನ ಗುರಿ ಟಿಎಫ್ ಸಿ ಇಂಡಿಯಾ ಯೋಜನೆ
11:34 AMಭಾರತದ ಮುಂದಿನ ಗುರಿ ಟೆಕ್ ಇಂಡಿಯಾ ಯೋಜನೆ. ಫಲಸ್ ಭೀಮಾ ಯೋಜನೆಯೂ ಸಹ ರೈತರಿಗೆ ನೆರವು. ಬೆಳೆ ವಿಮೆ ಯೋಜನೆಗೆ 9 ಸಾವಿರ ಕೋಟಿ ರೂ.
11:33 AMಇನ್ನು ಮೂರು ವರ್ಷಗಳಲ್ಲಿ ರಾಜ್ಯ ಸರಕಾರಗಳ ಹಣಕಾಸು ಸಹಯೋಗದೊಂದಿಗೆ ಸಹಕಾರಿ ಬ್ಯಾಂಕುಗಳ ಕಂಪ್ಯೂಟರೀಕರಣ ಹಾಗೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆಯಡಿಯಲ್ಲಿ ತರುವ ಪ್ರಯತ್ನಗಳು ಸಾಗಿವೆ.
11:33 AMರೈತರು ಉತ್ತಮ ಬೆಳೆಯನ್ನು ಬೆಳೆಯಲು ಸರಿಯಾದ ಸಮಯದಲ್ಲಿ ಸಾಲ ಸೌಲಭ್ಯ ಲಭ್ಯವಾಗಬೇಕು. ಹಿಂದುಳಿದ ಭಾಗದ ರೈತರಿಗೆ ಸಾಲಸೌಲಭ್ಯ ಸಿಗುವಂತೆ ನಮ್ಮ ಗಮನವನ್ನು ಹರಿಸಿದ್ದೇವೆ. ಇದರಲ್ಲಿ ಈಶಾನ್ಯ ಭಾರತದ ಭಾಗಗಳೂ ಸೇರಿವೆ.
11:32 AMಮಹಾತ್ಮಗಾಂಧಿ ಹೇಳಿಕೆ ಉಲ್ಲೇಖಿಸಿದ ಅರುಣ್ ಜೇಟ್ಲಿ. ಕೃಷಿ ಕ್ಷೇತ್ರದ ಅತ್ಯುತ್ತಮ ಪ್ರಗತಿಯಲ್ಲಿ ಭಾರತವಿದೆ. ಆರ್ಥಿಕವಾಗಿ ಅತೀ ವೇಗದಲ್ಲಿ ಭಾರತ ಬೆಳೆಯುತ್ತಿದೆ. ಸಣ್ಣ ಹಾಗೂ ಮಧ್ಯಮ ವರ್ಗದ ರೈತರಿಗೆ ಕೇಂದ್ರದ ನೆರವು.
11:30 AMನೋಟು ನಿಷೇಧದ ಲಾಭ ಸಾರ್ವಜನಿಕರಿಗೆ ಮುಂದಿನ ದಿನಗಳಲ್ಲಿ ಸಿಗಲಿದೆ. ಆರ್ಥಿಕ ಸ್ಥಿತಿ ಅಭಿವೃದ್ಧಿಗೆ ನೋಟು ನಿಷೇಧ ಪೂರಕ. ಬೆಳವಣಿಗೆ ಹಾಗೂ ಅಭಿವೃದ್ಧಿ ಹಾದಿಯಲ್ಲಿ ಕೇಂದ್ರ ಸರ್ಕಾರವಿದೆ.
11:29 AMಜಿಎಸ್ ಟಿ ಕೌನ್ಸಿಲ್ ಗಳಲ್ಲಿ ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ನೋಟು ನಿಷೇಧ ಕೇಂದ್ರ ಸರ್ಕಾರದ ಸಾಧನೆ ಎಂದು ಬಣ್ಣನೆ. ನೋಟು ನಿಷೇಧದ ನಿರ್ಧಾರದಿಂದ ಬ್ಯಾಂಕ್ ಗಳಲ್ಲಿ ಸಾಲ ಕಡಿಮೆಯಾಗಿದೆ.
11:27 AMಅಮಾನ್ಯೀಕರಣದ ಲಾಭ ದೇಶದಲ್ಲಿ ಈಗಾಗಲೇ ಕಾಣುತ್ತಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಹೆಚ್ಚಿನ ಬಂಡವಾಳ ಹೂಡಿಕೆ. ಉತ್ತಮ ಉದ್ದೇಶ ಎಂದಿಗೂ ಸಹ ವೈಫಲ್ಯ ಆಗುವುದಿಲ್ಲ.
11:26 AMಎಫ್ ಡಿಎ ನೀತಿಗಳಲ್ಲಿ ಮಹತ್ವದ ಬದಲಾವಣೆ. ಆರ್ಥಿಕ ಸುಧಾರಣೆಗೆ ಜಿಎಸ್ ಟಿ ಜಾರಿ. ಟೆಕ್ ಇಂಡಿಯಾಕ್ಕೆ ಒತ್ತು. ಮೂರು ಪ್ರಮುಖ ಸುಧಾರಣೆಗಳ ಘೋಷಣೆ.
11:25 AMಬಡರಿಗೆ ವಸತಿ ಸೌಲಭ್ಯಕ್ಕೆ ಕ್ರಮ, 2017ರ ಜಿಡಿಪಿ ದರ ಶೇ.7.2ರಷ್ಟು. ನೀರಾವರಿ ಯೋಜನೆಗಳಿಗೆ ಹೆಚ್ಚಿನ ಬಂಡವಾಳ. ಮೂಲಭೂತ ಸೌಕರ್ಯಕ್ಕೆ, ಬಡತನ ನಿರ್ಮೂಲನೆಗೆ ಹೆಚ್ಚಿನ ಒತ್ತು.
11:23 AMನೋಟು ನಿಷೇಧದ ನಂತರ ದೇಶದಲ್ಲಿ ಆರ್ಥಿಕ ಕ್ರಾಂತಿಯಾಗಿದೆ. ನೋಟು ನಿಷೇಧ ದೇಶದ ಅರ್ಥವ್ಯವಸ್ಥೆಗೆ ಭವಿಷ್ಯದಲ್ಲಿ ಲಾಭದಾಯಕವಾಗಲಿದೆ.
11:22 AMಜಗತ್ತಿನ 6ನೇ ಅತಿ ದೊಡ್ಡ ಆರ್ಥಿಕ ಶಕ್ತಿ ಹೊಂದಿದ ದೇಶ ಭಾರತವಾಗಿದೆ. ವಿದೇಶಿ ಬಂಡವಾಳದ ಹೂಡಿಕೆ ಶೇ.36ರಷ್ಟು ಹೆಚ್ಚಳವಾಗಿದೆ. ದೇಶದ ವಿದೇಶಿ ವಿನಿಮಯ ಹೆಚ್ಚಳವಾಗಿದೆ.
11:20 AMವಸಂತ ಪಂಚಮಿ ದಿನ ಬಜೆಟ್ ಮಂಡನೆ ಆರಂಭಿಸಿದ್ದೇನೆ. ದೇಶದ ಅರ್ಥವ್ಯವಸ್ಥೆಯ ಮೇಲೆ ಅಮೆರಿಕ ಚುನಾವಣೆಯ ಪ್ರಭಾವವೂ ಇದೆ. ಜಗತ್ತಿನ ಆರ್ಥಿಕ ಪ್ರಗತಿ ದೇಶದ ಅಭಿವೃದ್ಧಿ ಅವಲಂಬಿತವಾಗಿದೆ.
11:18 AMಬಜೆಟ್ ಅನ್ನು ಬಡವರಿಗೆ ತಲುಪಿಸುವುದೇ ನಮ್ಮ ಗುರಿ. ನಮ್ಮ ಅವಧಿಯಲ್ಲಿ ಹಣದುಬ್ಬರ ನಿಯಂತ್ರಣಕ್ಕೆ ಬಂದಿದೆ. ದೇಶದಲ್ಲಿ ಕಪ್ಪು ಹಣ ನಿಯಂತ್ರಿಸಿದ್ದೇವೆ. ಈ ವರ್ಷ ಎಲ್ಲಾ ಆರ್ಥಿಕ ವಲಯ ಚೇತರಿಕೆ ಕಾಣಲಿದೆ.
11:17 AMನೋಟು ನಿಷೇಧದ ನಂತರ ಮೊದಲ ಬಾರಿಗೆ ಬಜೆಟ್ ಮಂಡನೆ. ಕಳೆದ ವರ್ಷ ಜಿಡಿಪಿ ದರದಲ್ಲಿ ವೃದ್ಧಿ. ಉದ್ಯೋಗ ಕ್ಷೇತ್ರದಲ್ಲಿ ಬಲವರ್ಧನೆ ನಮ್ಮ ಗುರಿ. ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸುತ್ತಿದೆ.
11:15 AM4ನೇ ಕೇಂದ್ರ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವ ಜೇಟ್ಲಿ. ನಮ್ಮ ಅವಧಿಯಲ್ಲಿ ಎರಡಂಕೆಯ ಹಣದುಬ್ಬರ ನಿಯಂತ್ರಣ. ಸಾರ್ವಜನಿಕ ಹಣವನ್ನು ಸದುಪಯೋಗಪಡಿಸಲು ಕ್ರಮ.
11:13 AMಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಫೆ.1ರಂದು ಬಜೆಟ್ ಮಂಡಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ರೈಲ್ವೆ ಬಜೆಟ್ ಸಾಮಾನ್ಯ ಬಜೆಟ್ ನಲ್ಲಿ ವಿಲೀನ.
11:11 AMವಿಪಕ್ಷಗಳ ಗದ್ದಲದ ನಡುವೆಯೇ ಬಜೆಟ್ ಮಂಡನೆ ಆರಂಭಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ, ಸ್ಪೀಕರ್ ಸುಮಿತ್ರಾ ಮಹಾಜನ್ ಬಜೆಟ್ ಮುಂದೂಡಬೇಕೆಂಬ ಮನವಿಯನ್ನು ತಿರಸ್ಕರಿಸಿದ್ದಾರೆ.
11:08 AMಲೋಕಸಭಾ ಕಲಾಪ ಆರಂಭ. 79 ವರ್ಷದ ಇ ಮಹಮ್ಮದ್ ನಿಧನಕ್ಕೆ ಲೋಕಸಭೆಯಲ್ಲಿ ಮೌನ ಸಂತಾಪ ಸೂಚಿಸಲಾಯಿತು. ಆದರೆ ಸ್ಪೀಕರ್ ಬಜೆಟ್ ಮಂಡನೆ ಅನಿವಾರ್ಯ ಎಂದು ಹೇಳುತ್ತಿದ್ದಂತೆಯೇ ವಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದವು.
10:58 AMಬಜೆಟ್ ಮಂಡನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ. ಇನ್ನು ಕೆಲವೇ ಕ್ಷಣದಲ್ಲಿ ಲೋಕಸಭೆಯಲ್ಲಿ ಬಜೆಟ್ ಮಂಡನೆ ಆರಂಭವಾಗಲಿದೆ.
10:46 AMಬಜೆಟ್ ಮಂಡನೆ ಸಾಂವಿಧಾನಿಕ ಜವಾಬ್ದಾರಿ. ಹಾಗಾಗಿ ಇಂದೇ 11ಗಂಟೆಗೆ ಸಂಸತ್ ನಲ್ಲಿ ಬಜೆಟ್ ಮಂಡನೆಯಾಗಲಿದೆ ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಸ್ಪಷ್ಟಪಡಿಸಿದ್ದಾರೆ.
10:44 AMಬಜೆಟ್ ಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ವಿತ್ತ ಸಚಿವರು, ನಾನು ಬುಧವಾರ 2017-18ನೇ ಸಾಲಿನ ಬಜೆಟ್ ಅನ್ನು ಮಂಡಿಸುತ್ತಿದ್ದೇನೆ. ಅದೇ ರೀತಿ ನೀವು ನನಗೆ ನೇರವಾಗಿ ಪ್ರಶ್ನೆಗಳನ್ನು ಕೇಳಬಹುದು, ಅದಕ್ಕೆ ಉತ್ತರ ಕೊಡಲು ನನಗೆ ತುಂಬಾ ಸಂತಸದ ವಿಷಯವಾಗಿದೆ ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
10:27 AMನಿಗದಿಯಂತೆ 11ಗಂಟೆಗೆ ಬಜೆಟ್ ಮಂಡನೆಯಾಗಲಿದೆ. ಇದರಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಟ್ವೀಟ್ ಮಾಡುವ ಮೂಲಕ ಅನುಮಾನಕ್ಕೆ ತೆರೆ ಎಳೆದಿದ್ದಾರೆ.
10:26 AM2017ನೇ ಸಾಲಿನ ಬಜೆಟ್ ಮಂಡನೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ. ಪ್ರಧಾನಿ ನರೇಂದ್ರ ಮೋದಿ ಸಂಸತ್ ಭವನಕ್ಕೆ ಆಗಮನ. ಪ್ರಧಾನಿ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಲಿದೆ.
10:15 AMಸಂಸದ ಇ ಅಹ್ಮದ್ ನಿಧನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ, ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಬಜೆಟ್ ಇವತ್ತು ಮಂಡಿಸಬಾರದು ಎಂದು ವಿತ್ತ ಸಚಿವರಲ್ಲಿ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.
10:12 AMಸೂಟ್ ಕೇಸ್ ಜೊತೆ ಸಂಸತ್ ಭವನಕ್ಕೆ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಆಗಮಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಕೇಂದ್ರ ಬಜೆಟ್ ಮಂಡನೆಯಾಗಲಿದೆ.
10:08 AMಬಜೆಟ್ ಪ್ರತಿಗಳು ಈಗಾಗಲೇ ಸಂಸತ್ ಗೆ ಬಂದು ತಲುಪಿವೆ. ನಿಗದಿಯಂತೆ ಬೆಳಗ್ಗೆ 11ಗಂಟೆಗೆ ಬಜೆಟ್ ಮಂಡಿಸಲು ಸರ್ವಪಕ್ಷಗಳು ಸಮ್ಮತಿ ಸೂಚಿಸಿವೆ ಎಂದು ವರದಿ ವಿವರಿಸಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ